ಕಾರ್ಕಳ
ವಿಧಾನ ಮಂಡಲ ತಲುಪಿದ ಇನ್ನಾ ರೈತ ಪರ ಹೋರಾಟ: ಶಾಸಕ ಮಂಜುನಾಥ ಭಂಡಾರಿ ದ್ವನಿಗೆ ಉದಯ ಶೆಟ್ಟಿ ಮುನಿಯಾಲು ಸಂತಸ

ಇನ್ನಾ 400 ಕೆ ವಿ ವಿದ್ಯುತ್ ಪವರ್ ಲೈನ್ ಸಮಸ್ಯೆ ಬಗ್ಗೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ವಿಧಾನ ಮಂಡಲದಲ್ಲಿ ಧ್ವನಿ ಎತ್ತಿದ್ದಾರೆ.
ದಿನಾಂಕ 12.12.2024ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿ ಅವರು ನಂದಿಕೂರು ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆ ಕುರಿತಂತೆ ಹಾಗೂ ಇದರಿಂದ ರೈತರಿಗೆ ಆಗುವ ಅನಾನುಕೂಲವನ್ನು ವಿವರಿಸಿದರು.
ಕೂಡಲೇ ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತಂತೆ ಶೂನ್ಯ ವೇಳೆಯಲ್ಲಿ ಇಂಧನ ಸಚಿವರನ್ನು ಒತ್ತಾಯಿಸಿದರು.
ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣ ವಿರೋಧಿ ಹೋರಾಟ ಸಮಿತಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಾಸಕರಾದ ಮಂಜುನಾಥ ಭಂಡಾರಿಯವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತ ಇನ್ನಾ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದು.
ಉದಯ ಶೆಟ್ಟಿ ಸಂತಸ : ವಿಧಾನ ಪರಿಷತ್ ನಲ್ಲಿ ಇಂದು ಮಂಜುನಾಥ ಭಂಡಾರಿಯವರು ವಿದ್ಯುತ್ ಪವರ್ ಲೈನ್ ಬಗ್ಗೆ ಮಾಡಿರುವ ಪ್ರಸ್ತಾಪ
ಇನ್ನಾದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಿಕ್ಕ ಮೊದಲ ಜಯ ಎಂದು ತಿಳಿಸಿದ್ದಾರೆ.
ಈ ಯೋಜನೆಯನ್ನು ವಿರೋಧಿಸಿ ಅಹೋ ರಾತ್ರಿ ಹೋರಾಟವನ್ನು ರೈತರೊಂದಿಗೆ ಸೇರಿ ಮಾಡಿದ್ದೆವು. ಈ ಹೋರಾಟಕ್ಕೆ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿಯವರು ಮತ್ತಷ್ಟು ಬಲ ನೀಡಿರುವುದು ಹೋರಾಟಗಾರರಿಗೆ ಸಿಕ್ಕ ಮೊದಲ ಜಯ ಎಂದು ಹೇಳಿದ್ದಾರೆ
-
ವಿದೇಶ6 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ6 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business4 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business5 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business5 months ago
-
ಕಾರ್ಕಳ5 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ6 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ6 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ