Business
ವಕ್ಪ್ ಆಸ್ತಿ ವಿಚಾರ 150 ಕೋಟಿ ಲಂಚದ ಆಫರ್ ನೀಡಿದ್ದ ವಿಜಯೇಂದ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ

ವಕ್ಪ್ ಆಸ್ತಿ ವಿಚಾರದಲ್ಲಿ ಮೌನವಾಗಿರಲು ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷ ಅನ್ವರ್ ಮಾನಿಪ್ಪಾಡಿಯವರಿಗೆ ವಿಜಯೇಂದ್ರ 150 ಕೋಟಿ ಲಂಚ ಆಫರ್ ನೀಡಿದ್ದು ಬಯಲಾಗಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು BJP Karnataka ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ Narendra Modi ಅವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ.
‘’ಸನ್ಮಾನ್ಯ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು. ‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ?
ವಕ್ಪ್ ಆಸ್ತಿ ವಿಚಾರದಲ್ಲಿ Vijayendra Yediyurappa ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ.
ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ