Politics
ಕಾರ್ಕಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅಧ್ಯಕ್ಷ, ಸದಸ್ಯರ ಅಧಿಕಾರ ಸ್ವೀಕಾರ

ಕಾರ್ಕಳ: ಡಿ.17. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ಅಧ್ಯಕ್ಷ, ಸದಸ್ಯರುಗಳ ಅಧಿಕಾರ ಸ್ವೀಕಾರ ಸಮಾರಂಭವು ಕಾರ್ಕಳ ತಾಲೂಕು ಪಂಚಾಯತ್ ಕಚೇರಿ ಕಟ್ಟದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಅವರ ಉಪಸ್ಥಿತಿಯಲ್ಲಿ ನಡೆಯಿತು.
ಕಛೇರಿ ಉದ್ಘಾಟನೆಯ ಬಳಿಕ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ಮಾತನಾಡಿ ಕೊರೊನಾ ಲಾಕ್ಡೌನ್, ಬೆಲೆ ಏರಿಕೆ ಮುಂತಾದ ಸಮಸ್ಯೆಗಳಿಂದ ಅರ್ಥಿಕ ವ್ಯವಸ್ಥೆ ಹದಗೆಟ್ಟಿದ್ದು ಜನ ಸಾಮಾನ್ಯರು ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ. ಅಂತಹಾ ಬಡ ಜನರಿಗೆಂದೇ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದು ಪ್ರತಿ ಯೋಜನೆಗಳೂ ಅರ್ಹ ಫಲಾನುಭವಿಗಳಿಗೆ ತಲುಪುವಂತಾಗಬೇಕು. ಜನರ ಜೀವನಮಟ್ಟ ಸುಧಾರಣೆಗಾಗಿ ರಾಜ್ಯ ಸರ್ಕಾರ ಕೊಡುತ್ತಿರುವ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು. ಗ್ಯಾರಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ಮಾತನಾಡಿ ಯೋಜನೆಗಳು ಕಾಯ್ದೆಗಳ ರೂಪ ಪಡೆದಾಗ ಬಡವರಿಗೆ ಸಿಗುವ ಸವಲತ್ತನ್ನು ಯಾರಿಂದಲೂ ತಪ್ಪಿಸಲಾಗದು ಎಂದರು.
ತಾಲೂಕು ಗ್ಯಾರಂಟಿ ಸಮಿತಿಯ ನೂತನ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ ಅವರು ಮಾತನಾಡಿ ಗ್ಯಾರಂಟಿ ಅನುಷ್ಠಾನದಲ್ಲಿ ಅಧಿಕಾರಿಗಳ ಸಹಕಾರ ಅಗತ್ಯ, ಎಲ್ಲರೂ ಜೊತೆಯಾಗಿ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕೆ ಶ್ರಮಿಸೋಣವೆಂದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರಿಗೂ ಹೂಗುಚ್ಚ ನೀಡಿ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ತಹಷೀಲ್ದಾರ್ ಪ್ರದೀಪ್ ಆರ್. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಪುರಸಭಾ ಮುಖ್ಯಾದಿಕಾರಿ ರೂಪಾ.ಟಿ. ಶೆಟ್ಟಿ ಹಾಗೂ ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದ ಮುನ್ನ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಉಪಸ್ಥಿತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಭೆಯ ಬಳಿಕ ಎಲ್ಲಾ ನಾಯಕರು, ಪದಾಧಿಕಾರಿಗಳು, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಸದಸ್ಯರುಗಳು ಪಾದಯಾತ್ರೆಯ ಮೂಲಕ ಉದ್ಘಾಟನೆಗೊಳ್ಳಲಿರುವ ಕಛೇರಿ ಪ್ರಾಂಗಣಕ್ಕೆ ತಲುಪಿದರು.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ