Politics
ನಕ್ಸಲ್ ಶರಣಾಗತಿ ನಡೆಸಿ ಅಮಿತ್ ಶಾ ಆನಂದ ಭಾಷ್ಪ ಸುರಿಸಿದಾಗ ಯಾಕೆ ಸುನೀಲ್ ಪ್ರಶ್ನೆ ಮಾಡಲಿಲ್ಲ: ಸಿದ್ದರಾಮಯ್ಯ

ಚತ್ತಿಸ್ಗಡದಲ್ಲಿ ನಕ್ಸಲ್ ಶರಣಾಗತಿ ನಡೆಸಿ ಅಮಿತ್ ಶಾ ಆನಂದ ಭಾಷ್ಪ ಸುರಿಸಿದಾಗ ಯಾಕೆ ಸುನೀಲ್ ಪ್ರಶ್ನೆ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದಾರೆ. ನಕ್ಸಲ್ ಶರಣಗತಿಯನ್ನು ವಿರೋಧಿಸಿ ಸಿದ್ದರಾಮಯ್ಯರನ್ನು ತೀಕಿಸಿದ ಸುನಿಲ್ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಶ್ನೆಗಳನ್ನು ಕೇಳಿದ್ದಾರೆ.
ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಛತ್ತೀಸ್ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ? ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ?
ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಅವರಿಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ?
ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ.
ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ.
-
ವಿದೇಶ6 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ6 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business4 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business5 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business5 months ago
-
ಕಾರ್ಕಳ5 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ6 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ6 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ