Politics
ಯಶ್ಪಾಲ್ ಸುವರ್ಣರ ಸೇಡಿನ ರಾಜಕೀಯ ಉಡುಪಿಯ ಅಭಿವೃದ್ಧಿಗೆ ಮಾರಕ: ಮಾಜಿ ಶಾಸಕ ರಘುಪತಿ ಭಟ್ ಬೇಸರ

ಉಡುಪಿ.ಜ.22. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕ್ಷೇತ್ರದ ಶಾಸಕನಾಗಿ ಕೆಲಸ ಮಾಡುವುದು ಬಿಟ್ಟು ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದು ಉಡುಪಿ ಮಾಜಿ ಶಾಸಕರಾದ ರಘುಪತಿ ಭಟ್ ಆರೋಪ ಮಾಡಿದ್ದಾರೆ.
ಅವರು ಇಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ನಾನು ಕಾಂಗ್ರೆಸಿನ ಯು.ಆರ್. ಸಭಾಪತಿ, ಪ್ರಮೋದ್ ಮದ್ವರಾಜ್ ಅವರನ್ನು ಎದುರಿಸಿಕೊಂಡು ರಾಜಕಾರಣ ಮಾಡಿ ಬಂದವನು. ನಾವು ರಾಜಕಾರರಣದಲ್ಲಿ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಪರಸ್ಪರ ವಿರೋದ ಮಾಡುತ್ತಿದ್ದೇವೆಯೇ ಹೊರತು ಯಾವತ್ತೂ ವೈಯುಕ್ತಿಕ ದ್ವೇಷವನ್ನು ಮಾಡಿದವರಲ್ಲ. ವೈಯುಕ್ತಿಕ ವ್ಯವಹಾರಗಳಲ್ಲಿ ಯಶ್ಪಾಲ್ ಸುವರ್ಣ ಅನಗತ್ಯವಾಗಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ ಎಂದು ರಘುಪತಿ ಭಟ್ ಆಕ್ರೋಶ ವ್ಯಕ್ತಪಡಿಸಿದರು.
ಯಶ್ಪಾಲ್ ಸುವರ್ಣ ಅವರ ವೈಯಕ್ತಿಕ ಬೆಳವಣಿಗೆಯಲ್ಲಿ ನನ್ನ ಕೊಡುಗೆ ಇದೆ, ಬಿಜೆಪಿ ಭಂಡಾಯ ಅಭ್ಯರ್ಥಿಯ ಬೆಂಬಲಿಗರಾಗಿ ನನ್ನ ಚುನಾವಣೆಯಲ್ಲಿ ಕೆಲಸ ಮಾಡಿದ್ದ ಹಾಗೂ ಮಲ್ಪೆಯ ಬೆತ್ತಲೆ ಪ್ರಕರಣದ ಆರೋಪಿಯಾಗಿದ್ದ ಯಶ್ಪಾಲ್ ಸುವರ್ಣ ಅವರನ್ನು ಯಾವುದೇ ದ್ವೇಷ ರಾಜಕಾರಣ ಮಾಡದೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಮಾಡಿ ಪಕ್ಷದಲ್ಲಿ ಬೆಳೆಯುವಲ್ಲಿ ಸಹಕಾರ ನೀಡಿದ್ದೇನೆ.
ಯಶ್ಪಾಲ್ ಸುವರ್ಣ ಅವರನ್ನು ನಗರಸಭೆಗೆ ನಾಮನಿರ್ದೇಶನ ಹಾಗೂ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಗಿರಿ ಲಭಿಸುವಂತೆ ಸಹಕಾರ ನೀಡಿದ್ದೇನೆ. ಇಷ್ಟೆಲ್ಲಾ ಸಹಕಾರ ನೀಡಿದರುಯ ಯಾವುದೇ ಕೃತಜ್ಙತಾ ಭಾವನೆ ಇಲ್ಲದ ಯಶ್ಪಾಲ್ ಸುವರ್ಣ ಅವರು ಕೃತಘ್ನ ಹಾಗೂ ಹಿರಿಯರಿಗೆ ಗೌರವ ಕೊಡದವರು ಎಂದು ಬೇಸರ ವ್ಯಕ್ತಪಡಿಸಿದರು.
ನನ್ನ ವಿರುದ್ದದ ದ್ವೇಷದಿಂದ ನನ್ನ ಅವಧಿಯಲ್ಲಿ ಜಾರಿಯಾದ ಯೊಇಜನೆಗಳಿಗೆ ಶಾಸಕರು ತಡೆಯೊಡ್ಡುತ್ತಿರುವುದು ಇದು ಶಾಕರಯ ಉಡುಪಿಯ ಜನತೆಗೆ ಮಾಡುವ ದ್ರೋಹವಾಗಿದೆ ಎಂದು ನೇರವಾಗಿ ಆರೋಪ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕರ ಆಪ್ತರಾದ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ