ಕಾರ್ಕಳ
ಕಾರ್ಕಳ: ಕಾಂಗ್ರೆಸ್ ವಾರ್ಡ್ ಗ್ರಾಮ ಸಭೆ, ಹಿರಿಯರಿಗೆ ಸನ್ಮಾನ

(ವಾಯ್ಸ್ ಆಫ್ ಕಾರ್ಲ ವರದಿ)
ಕಾರ್ಕಳ: ಕಲ್ಯಾ ಗ್ರಾಮದ ವಾರ್ಡ್ ಕಾರ್ಯಕರ್ತರ ಸಭೆಯು ಗ್ರಾಮೀಣ ಸಮಿತಿಯ ಅಧ್ಯಕ್ಷ ರಘುಪತಿ ಪೂಜಾರಿಯವರ ಮನೆಯಲ್ಲಿ ಜರುಗಿತು.
ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಮಾತನಾಡಿ ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಯ ಮೂಲಕ ಜನಪರ ಆಡಳಿತವನ್ನು ನೀಡುತ್ತಿದೆ, ಇದರ ಪರಿಣಾಮ ಜನರ ಜೀವನ ಮಟ್ಟ ಸುಧಾರಿಸಿ ಎಲ್ಲರೂ ನೆಮ್ಮದಿಯ ಬದುಕು ಕಟ್ಟುವಂತಾಗಿದೆ, ಸ್ಥಳಿಯ ಸಂಸ್ಥೆಯಲ್ಲಿಯೂ ಕಾಂಗ್ರೆಸ್ ಪಕ್ಷದ ಆಡಳಿತವಿದ್ದರೆ ಇನ್ನೂ ಹೆಚ್ಚಿನ ಅನುಕೂಲವಾಗುತ್ತದೆ ಹಾಗಾಗಿ ಸ್ಥಳಿಯ ಕಾಂಗ್ರೆಸ್ ಆಡಳಿತಕ್ಕಾಗಿ ಪಕ್ಷ ಸಂಘಟನೆಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಬ್ಲಾಕ್ ಅದ್ಯಕ್ಷ ಶುಭದರಾವ್ ಮಾತನಾಡಿ ಬ್ಲಾಕ್ ಕಾಂಗ್ರೆಸ್ ಸ್ಥಳಿಯ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಪರಿಹರಿಸುವ ನಿಟ್ಟಿನಲ್ಲಿ ಗ್ರಾಮೀಣ ಸಮಿತಿಗೆ ಸರ್ವ ಸಹಕಾರ ನೀಡುತ್ತೇವೆ. ಗ್ರಾಮೀಣ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಹೊಸ ಹೆಜ್ಜೆಯನ್ನು ಇಟ್ಟಿದ್ದೇವೆ ಎಂದರು.ಪಕ್ಷದ ಹಿರಿಯರಾದ ಅಚ್ಚುತ ಆಚಾರ್ಯ, ಅರುಣ ಜೋಗಿ, ಮತ್ತು ಸಾಧಕ ಯುವ ಕಾರ್ಯಕರ್ತ ರಿತಿನ್ ಪೂಜಾರಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಸುಧಾಕರ್ ಕೋಟ್ಯಾನ್, ಪಕ್ಷದ ಪಧಾದಿಕಾರಿಗಳಾದ ಸೋಮನಾಥ ನಾಯಕ್, ದೀಪಕ್ ಕೋಟ್ಯಾನ್, ಕೃಷ್ಣ ಪೂಜಾರಿ, ಸಂತೋಷ್ ದೇವಾಡಿಗ, ಕಿರಣ್ ನಾಯಕ್, ಮಂಜುನಾಥ್ ಜೋಗಿ, ಅವಿನಾಶ್ ಶೆಟ್ಟಿ ಬೋಳ, ಯೋಗೀಶ್ ಬೋಳ ಮೊದಲಾದವರು ಉಪಸ್ಥಿತರಿದ್ದರು. ಗ್ರಾಮೀಣ ಸಮಿತಿಯ ಅದ್ಯಕ್ಷ ರಘುಪತಿ ಪೂಜಾರಿ ಸ್ವಾಗತಿಸಿದರು ಗ್ಯಾರಂಟಿ ಸಮಿತಿ ಸದಸ್ಯ ಯತೀಶ್ ನಿರೂಪಿಸಿ ಬೂತ್ ಅದ್ಯಕ್ಷ ಸತೀಶ್ ಧನ್ಯವಾದವಿತ್ತರು.
-
ವಿದೇಶ6 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ6 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business4 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business5 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business5 months ago
-
ಕಾರ್ಕಳ5 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ6 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ6 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ