ಜಿಲ್ಲೆ
ಸಾವಿನ ಶೋಕಾಂಗಣದಲ್ಲಿ ಬಿಜೆಪಿ ಮತ ಹೆಕ್ಕುವ ರಾಜಕೀಯ ಮಾಡುತ್ತಿದೆ: ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನಿರೀಕ್ಷಿತ ಕಾಲ್ತುಳಿತದಿಂದ ಉಂಟಾದ ಅನಪೇಕ್ಷಿತ ಸಾವುಗಳು ಮನುಕುಲದ ಮನಕರಗುವ ವಿಷಾದನೀಯ ಘಟನೆ. ಆದಾಗ್ಯೂ ಪ್ರತಿಪಕ್ಷ ಬಿಜೆಪಿ ಇದನ್ನೇ ಅಸ್ತ್ರವಾಗಿ ಬಳಸಿಕೊಂಡು ಸಿಎಂ, ಡಿಸಿಎಂ ಮತ್ತು ಗೃಹಸಚಿವರ ರಾಜೀನಾಮೆ ಕೇಳುವ ಮೂಲಕ “ಸಾವಿನ ಶೋಕಾಂಗಣದಲ್ಲಿ ಮತ ಹೆಕ್ಕುವ” ರಾಜಕೀಯ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ.
2024 ಜುಲೈಯಲ್ಲಿ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಬೋಲೇಬಾಬಾ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿದಲ್ಲಿ 121ಜನರು ಹಾಗೂ ಈ ಭಾರಿಯ ಕುಂಭಮೇಳ ಪ್ರಯಾಗ್ ರಾಜ್ ನಲ್ಲಿ ಒಂದು ಲೆಕ್ಕಾಚಾರದ ಪ್ರಕಾರ 180 ಕ್ಕೂ ಹೆಚ್ಚು ಯಾತ್ರಿಕರು ಮಡಿದಾಗ ಅಲ್ಲಿನ ಮುಖ್ಯಮಂತ್ರಿ ಯೋಗೀ ಆದಿತ್ಯನಾಥ್, 2025 ಮೇ ತಿಂಗಳಲ್ಲಿ ಗೋವಾದ ಶಿರಬಾಗ್ ದೇಗುಲದಲ್ಲಾದ ಕಾಲ್ತುಳಿತದಲ್ಲಿ 8ಕ್ಕೂ ಹೆಚ್ಚು ಭಕ್ತರ ಸಾವು ಸಂಭವಿಸಿ ರಾಯ ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಂತ್, 2025 ಜನವರಿಯಲ್ಲಿ ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ 6ಕ್ಕೂ ಹೆಚ್ಚು ಭಕ್ತರು ಅಸುನೀಗಿದಾಗ ಅಲ್ಲಿನ ಮುಖ್ಯಮಂತ್ರಿ ಕೇಂದ್ರದಲ್ಲಿ ಇವರ ಪಾಲುದಾರ ಚಂದ್ರಬಾಬು ನಾಯ್ಡು, 2022 ನವಂಬರದಲ್ಲಿ ಗುಜರಾತಿನ ಮೋರ್ಭಿಯಲ್ಲಿ ತೂಗು ಸೇತುವೆ ಮುರಿದು 130ಕ್ಕೂ ಹೆಚ್ಚು ಜನರು ಸತ್ತಾಗ ಅಲ್ಲಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆದಿಯಾಗಿ ಅವರದ್ದೇ ಪಕ್ಷದ ಆಡಳಿತದ ರಾಜ್ಯಗಳಲ್ಲಿ ನಡೆದ ಈ ಮಹಾ ದುರಂತಗಳಿಗೆ ಸರಕಾರಗಳನ್ನು ಹೊಣೆಯಾಗಿಸಿ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳದ ಬಿಜೆಪಿ ನಾಯಕರಿಗೆ ರಾಜ್ಯ ಸರಕಾರದ ಸಿಎಂ,ಡಿಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕ ಹಕ್ಕಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಪುಲ್ವಾಮಾದಲ್ಲಿ ಆಳುವ ಕೇಂದ್ರ ಸರಕಾರದ ಗುಪ್ತಚರ ಮಾಹಿತಿ ವೈಪಲ್ಯದಿಂದಾದ ಉಗ್ರಗಾಮಿಗಳ ಆಕ್ರಮಣದಿಂದ ದೇಶ ಕಾಯುವ 40 ಸೈನಿಕರ ಹತ್ಯೆ ಹಾಗೂ ಅದೇ ಸರಕಾರದ ಭದ್ರತಾ ವೈಪಲ್ಯದಿಂದ ಫಹಲ್ಗಾಮ್ ನಲ್ಲಿ 26ಹೆಣ್ಣು ಮಕ್ಕಳ ಗಂಡಂದಿರ ದಾರುಣ ಹತ್ಯೆಯಾಗಿ ಅವರ ಹಣೆಯ ಸಿಂಧೂರ ಅಳಿಸಿ ಹೋದಾಗ ಹೊಣೆ ಹೊತ್ತ ದೇಶದ ಪ್ರಧಾನಿಯ ರಾಜೀನಾಮೆ ಕೇಳ ಬೇಕಿತ್ತು. ಅಂದು ಬೇಡವಾದ ರಾಜೀನಾಮೆಯ ನಾಟಕ ಇಂದು ಕರ್ನಾಟಕದ ಪರಿಸ್ಥಿತಿಗೆ ಬೇಕಾದದ್ದು ಬಿಜೆಪಿಯ ಸ್ವಹಿತಾಸಕ್ತಿಯ ರಾಜಕೀಯ ಷಡ್ಯಂತ್ರಕ್ಕೆ ಸಾಕ್ಷಿ ಆಗಿದೆ. ಇದರ ಹಿಂದೆ ಆಂತರೀಕ ಕಚ್ಚಾಟದಿಂದ ಬೆಂದು ಹೋಗಿರುವ ರಾಜ್ಯ ಬಿಜೆಪಿಯ ಅಸ್ತಿತ್ವದ ಪ್ರಶ್ನೆಯೂ ಅಡಗಿದೆ ಎಂದು ಕಾಂಗ್ರೆಸ್ ವ್ಯಾಖ್ಯಾನಿಸಿದೆ. ದೇಶದಲ್ಲಿ ಇಂತಹ ದುರಂತಗಳು ಹೊಸತೇನಲ್ಲ. ಇದನ್ನು ಅಳುವ ಸರಕಾರಗಳ ಆಡಳಿತಾತ್ಮಕ ವೈಫಲ್ಯ ಎಂದು ವ್ಯಾಖ್ಯನಿಸಲಾಗದು. ಸರಕಾರಗಳ ಮುಖ್ಯಸ್ಥರ ರಾಜೀನಾಮೆ ಇದಕ್ಕೆ ಪರಿಹಾರವೂ ಅಲ್ಲ. ಆದರೆ ದುರಂತಗಳಿಗೆ ಕಾರಣವಾದ ಅಂಶವನ್ನು ಅನ್ವೇಶಿಸಿ ತಪ್ಪತಸ್ಥರನ್ನು ಶಿಕ್ಷಿಸಿ ಮುಂದೆ ಇಂತಹ ಇಂತಹ ಘಟನೆಗಳು ನಡೆಯದಂತೆ ನೋಡುವುದು ಸರಕಾರಗಳ ಕರ್ತವ್ಯ. ಮುಖ್ಯವಾಗಿ ಜನರ ಅಂಧ ಅಭಿಮಾನದ ಭಾವನಾತ್ಮಕ ಉನ್ಮಾದಕತೆ ಮತ್ತು ಕಾರ್ಯಕ್ರಮ ಆಯೋಜಕರ ನಿರ್ವಹಣಾ ವೈಪಲ್ಯ ಇಂತಹ ಅನಿರೀಕ್ಷಿತ ಘಟನೆಗಳಿಗೆ ಕಾರಣವಾಗುತ್ತದೆ. ಇಂತಹ ಘಟನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಖಂಡನೀಯ. ಅದೇನಿದ್ದರೂ ಇಂತಹ ದುರ್ಘಟನೆ ರಾಜ್ಯದಲ್ಲಿ ಮರುಕಳಿಸದಿರಲಿ ಎನ್ನುವುದೇ ಕಾಂಗ್ರೆಸ್ ಆಶಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ
.
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ