ಕಾರ್ಕಳ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ- ಬಿಜೆಪಿ ಯುವ ಮೋರ್ಚ ಮುಖಂಡ ಸುಹಾಸ್ ಶೆಟ್ಟಿ ಮುಟ್ಲುಪಾಡಿ ವಿರುದ್ದ ಸಹಾಯಕ ಪೋಲೀಸ್ ಅಧೀಕ್ಷಕರಿಗೆ ಪ್ರತೇಕ ದೂರು ದಾಖಲಿಸಿದ ಮಹಿಳಾ ಕಾಂಗ್ರೆಸ್ ಮತ್ತು ವಿದ್ಯಾರ್ಥಿ ಕಾಂಗ್ರೆಸ್

ಬಿಜೆಪಿ ಯುವ ಮೋರ್ಚ ಮುಖಂಡ ಶಿಕ್ಷಕ ಸುಹಾಸ್ ಶೆಟ್ಟಿ ಮುಟ್ಲುಪಾಡಿ ತನ್ನ ಕಾಲೇಜಿನ ವಿದ್ಯಾರ್ಥಿಗೆ ಪೋನ್ ಮೂಲಕ ಲೈಂಗಿಕ ಕಿರುಕುಳ ನೀಡುವ ಆಡೀಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಮತ್ತು ಎನ್. ಎಸ್. ಯು.ಐ. ವಿದ್ಯಾರ್ಥಿ ಸಂಘಟನೆಯು ಪ್ರತೇಕವಾಗಿ ಉಪ ಪೋಲೀಸ್ ಅಧೀಕ್ಷಕರಿಗೆ ದೂರು ನೀಡಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿರುವ ಆಡಿಯೋದಲ್ಲಿ ಸುಹಾಸ್ ಶೆಟ್ಟಿಯು ಅಪ್ರಾಪ್ತ ವಿದ್ಯಾರ್ಥಿನಿಗೆ ತನ್ನ ಜೊತೆ ಬರುವಂತೆ ಬಲವಂತವಾಗಿ ಒತ್ತಾಯಿಸುತ್ತಿದ್ದಾರೆ, ಈ ಹಿಂದೆಯು ಒಂದು ಕಾಲೇಜಿನಲ್ಲಿ ತನ್ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪರಿಣಾಮ ಕಾಲೇಜು ಮಂಡಲಿ ಕೆಲಸದಿಂದ ವಜಾ ಮಾಡಿತ್ತು, ವಿದ್ಯಾರ್ಥಿಗಳು ಭಯದಿಂದ ದೂರು ನೀಡಲು ಹಿಂದೇಟು ಹಾಕುವ ಕಾರಕ್ಕಾಗಿ ಇವರು ಮತ್ತೆ ಮತ್ತೆ ಈ ವರ್ತನೆಯನ್ನು ಪುನರಾವರ್ತಿಸುತ್ತಾರೆ, ಅವರನ್ನು ತಕ್ಷಣ ಬಂದಿಸಿ ಮೊಬೈಲ್ ವಶಕ್ಕೆ ಪಡೆದರೆ ಇವರ ಕಿರುಕುಳಕ್ಕೆ ಬಲಿಯಾದವರ ಎಲ್ಲಾ ಮಾಹಿತಿ ಸಿಗುವ ಸಾದ್ಯತೆ ಇದೆ ಈ ಬಗ್ಗೆ ಪೋಲೀಸ್ ಇಲಾಖೆ ಸುಮೋಟೊ ಕೇಸು ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಬದಲ್ಲಿ ಮಹಿಳಾ ಕಾಂಗ್ರೇಸ್ ಅದ್ಯಕ್ಷೆ ಭಾನು ಭಾಸ್ಕರ್ ಪೂಜಾರಿ, ರೀನಾ ಜೂಲಿಯೆಟ್, ಪುರಸಭಾ ಸದಸ್ಯೆ ಪ್ರತಿಮಾ ರಾಣೆ, ಪ್ರಭಾ ಕಿಶೋರ್, ರೆಹಮತ್, ಸುನೀತಾ ಶೆಟ್ಟಿ, ಆಶಾ ಬೈಲೂರು, ಶೋಬಾ ಪ್ರಸಾದ್, ಶೋಬಾ ರಾಣೆ, ರಾಜೇಶ್ವರಿ ಸಾಣೂರು, ಚರಿತ್ರಾ. ಎನ್.ಎಸ್.ಯು.ಐ. ಸಂಘಟನೆಯ ಅದ್ಯಕ್ಷರಾದ ಗುರುದೀಪ್ ನಿಟ್ಟೆ, ಉದಿತ್ ಶೆಟ್ಟಿಗಾರ್, ಪಧಾದಿಕಾರಿಗಳಾದ ಸಂಸ್ಕೃತ್ ಎನ್. ಆರ್, ಈವನ್ಸ್, ನಿತೀಶ್, ಹಾಗೂ ಸುನೀಲ್ ಭಂಡಾರಿ ಉಪಸ್ಥಿತರಿದ್ದರು
-
ವಿದೇಶ8 months ago
ಇಸ್ರೇಲ್ ದಾಳಿ: ಉತ್ತರ ಗಾಜಾದಲ್ಲಿ ವಸತಿ ಕಟ್ಟಡ ಧ್ವಂಸ; ಮಕ್ಕಳು, ಮಹಿಳೆಯರು ಸೇರಿ 93 ಪ್ಯಾಲೆಸ್ತೀನಿಯರು ಸಾವು!
-
ದೇಶ8 months ago
ಅದಾನಿ ಸಮೂಹ, ಪ್ರಮುಖ ನಿಯಂತ್ರಕ ಸಂಸ್ಥೆಗಳು, ಬಿಜೆಪಿ ನಡುವೆ ‘ಅಪಾಯಕಾರಿ ನಂಟು’: ಕಾಂಗ್ರೆಸ್ ಆರೋಪ
-
Business6 months ago
ನ್ಯೂಸ್ ಕಾರ್ಲ ವೆಬ್ ನ್ಯೂಸ್ ವರದಿ ಸುಳ್ಳು ನಾನು ನನ್ನ ಹೇಳಿಕೆಗೆ ಬದ್ದ, ಪ್ರತಿಭಟನಾಕಾರರ ವಿರುದ್ದ ಮಾತನಾಡುವ ರೇಷ್ಮಾ ಶೆಟ್ಟಿ ಅದಾನಿಯ ವಕ್ತಾರರೇ..? ಸರಿತಾ ಶೆಟ್ಟಿ ಇನ್ನಾ ಪ್ರಶ್ನೆ
-
Business7 months ago
ರಾಷ್ಟ್ರೀಯ ಸಮಸ್ಯೆಯಾಗಿರುವ ನಕ್ಸಲ್ ಪಿಡುಗನ್ನು ಕೇವಲ ರಾಜ್ಯಕ್ಕೆ ಸೀಮಿತಗೊಳಿಸಿ ಮಾತನಾಡುವ ಸುನೀಲ್ ಕುಮಾರರದ್ದು ಬೌಧಿಕ ದಿವಾಳಿತನವಾಗಿದೆ: ಯೋಗೀಶ್ ಇನ್ನಾ
-
Business7 months ago
-
ಕಾರ್ಕಳ7 months ago
ಪಳ್ಳಿ ಕಣಂಜಾರು ಬೈಲೂರು ಮಾರ್ಗವಾಗಿ ಕಾರ್ಕಳಕ್ಕೆ ಸರ್ಕಾರಿ ಬಸ್ ಸೇವೆ ಆರಂಭ; ಮುನಿಯಾಲ್ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ
-
ರಾಜ್ಯ8 months ago
ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
-
ಕಾರ್ಕಳ8 months ago
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ